ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಬೇಕು- ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ….? ಇಲ್ಲಿದೆ ಮಾಹಿತಿ‌ ಓದಿ

ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಿ ಎಂದರು.

*ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ*

ರಾಗಿ (ಮಳೆಯಾಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.
ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ರೈತರಿಗೆ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ಕಲ್ಪಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

*ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು*

ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

4 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

15 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

19 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

21 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

23 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago