ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಬೇಕು- ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ….? ಇಲ್ಲಿದೆ ಮಾಹಿತಿ‌ ಓದಿ

ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಿ ಎಂದರು.

*ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ*

ರಾಗಿ (ಮಳೆಯಾಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.
ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ರೈತರಿಗೆ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ಕಲ್ಪಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

*ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು*

ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

5 minutes ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

14 minutes ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

6 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

14 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago