ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಜನವರಿ 01 ರಿಂದ 09 ರ ವರೆಗೆ 173 ಮಿ.ಮೀ ವಾಡಿಕೆ ಮಳೆಗೆ 236 ಮಿ.ಮೀ ಮಳೆಯಾಗಿದೆ. ಜೂನ್ ಮಾಹೆಯಲ್ಲಿ 31 ಮಿ.ಮೀ ಮಳೆಗೆ 85 ಮಿ.ಮೀ ರಷ್ಟು ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಒಟ್ಟು 2179 ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸುವ ಗುರಿ ಹೊಂದಲಾಗಿದ್ದು. ಈ ವರೆಗೆ 222.23 ಕ್ವಿಂಟಾಲ್ ರಾಗಿ, 2.35 ಕ್ವಿಂಟಾಲ್ ತೊಗರಿ, 2.15 ಕ್ವಿಂಟಾಲ್ ಅಲಸಂದೆ, 11.02 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜ ರೈತರಿಗೆ ವಿತರಿಸಲಾಗಿದೆ ಎಂದು ಕೃಷಿ ಆಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಕೃಷಿ, ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ರೈತರು ಈಗಾಗಲೇ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅಗತ್ಯ ದಾಸ್ತಾನು ಶೇಖರಿಸಿಡಿ ಎಂದರು.

ಅನ್ನ ಭಾಗ್ಯ ಯೋಜನೆ ಅಡಿ ಜಿಲ್ಲೆಯಲ್ಲಿ 2,29,390 ಫಲಾನುಭವಿಗಳಿದ್ದು ಅದರಲ್ಲಿ 2,09,389 ಫಲಾನುಭವಿಗಳಿಗೆ 12,19,37,430 ರೂ.ಗಳು  ಏಪ್ರಿಲ್ ಮಾಹೆಯಲ್ಲಿ  ಜಮೆಯಾಗಿದೆ. ಆಧಾರ್ ಕಾರ್ಡ್ ಇ- ಕೆವೈಸಿ ಸಮಸ್ಯೆ ಹಾಗೂ ಇನ್ನಿತರ ಕಾರಣಗಳಿಂದ ಇತರೆ ಅರ್ಹ ಫಲಾನುಭವಿಗಳು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಅಂತಹ ಫಲಾನುಭವಿಗಳನ್ನು ಗುರ್ತಿಸಿ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಿ ಎಂದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 3,57,122 ಕುಟುಂಬಗಳು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,16,054 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ.

*344 ಕೋಟಿ ಗೃಹಲಕ್ಷ್ಮಿ ಹಣ ಜಮೆ:* 

ಗೃಹ ಲಕ್ಷ್ಮಿ ಯೋಜನೆ ಆರಂಭವಾದ ದಿನದಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ 17,39,675 ಫಲಾನುಭವಿಗಳಿಗೆ 3,44,10,60,000 ರೂಗಳು ಹಣ ವರ್ಗಾಯಿಸಲಾಗಿದೆ. ಮೇ ಮಾಹೆಯವರೆಗೆ 2,03,184 ಫಲಾನುಭವಿಗಳು ನೋಂದಣಿ ಆಗಿದ್ದು ಮೇ. ಮಾಹೆಯಲ್ಲಿ 40,63,68,000 ರೂ.ಗಳು ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.

ಯುವ ನಿಧಿ ಯೋಜನೆಯಡಿ 2094 ಅರ್ಜಿಗಳು ಸ್ವೀಕೃತ ವಾಗಿದ್ದು ಮೇ ಅಂತ್ಯಕ್ಕೆ 912 ಅರ್ಹ ನಿರುದ್ಯೋಗ ಪದವೀಧರಿಗೆ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ.

ವಸತಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯಲ್ಲಿ ವಸತಿ ರಹಿತ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ವರದಿ ನೀಡಿ, ಈಗಾಗಲೇ ವಿವಿಧ ವಸತಿ ಯೋಜನೆಗಳಡಿ ಕಾರ್ಯಾರಂಭಗೊಂಡಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಲ್ಲಿ ಬಾಕಿ ಇರುವ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ತ್ವರಿತವಾಗಿ ಶಾಸಕರಿಂದ ಆಯ್ಕೆ ಪಟ್ಟಿ ಪಡೆದು ನಿರ್ದಿಷ್ಟ ಗುರಿ ತಲುಪಲು ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

4 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

16 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

19 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago