Categories: ಮೈಸೂರು

ರೈತರಿಗೆ 5 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ: ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೆ ಕ್ರಮ- ಸಿಎಂ ಸಿದ್ದರಾಮಯ್ಯ

ಜನರಿಗೆ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಹಾಗೂ ಮೇವು ಬೆಳೆಯಲು ಹಾಗೂ ಸಂಗ್ರಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.

ಈ ಬಾರಿ ಮಳೆಯ ಅಭಾವದಿಂದಾಗಿ ರೈತರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರೈತರಿಗೆ ಐದು ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ವಿಶೇಷವಾಗಿ ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯ ಭತ್ತ ಬೆಳೆಯುವ ರೈತರಿಗೆ ಏಳು ಗಂಟೆ ವಿದ್ಯುತ್ ನೀಡಲು ಆದೇಶಿಸಿದೆ. ಸುಮಾರು 2 ಸಾವಿರ ಮೆಗಾ ವ್ಯಾಟ್ ವರೆಗೆ ವಿದ್ಯುತ್ ಖರೀದಿ ಮಾಡಬೇಕಾಗಿದೆ. ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕಲ್ಲಿದ್ದಲ್ಲಿನ ಗುಣಮಟ್ಟದ ಮೇಲೆ ವಿದ್ಯುತ್ ಉತ್ಪಾದನೆಯ ಪ್ರಮಾಣ ನಿಗದಿಯಾಗುತ್ತದೆ. ಅದರಲ್ಲಿ ಕೆಲವೊಮ್ಮೆ 50 ರಿಂದ 60 ಮೆ.ವ್ಯಾ ವಿದ್ಯುತ್ ಮಾತ್ರ ಉತ್ಪಾದನೆ ಸಾಧ್ಯವಾಗುತ್ತದೆ ಎಂದು ಹೇಳಿದರು.

2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆಟ್ರ್ಸ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago