ಜನರಿಗೆ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಹಾಗೂ ಮೇವು ಬೆಳೆಯಲು ಹಾಗೂ ಸಂಗ್ರಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.
ಈ ಬಾರಿ ಮಳೆಯ ಅಭಾವದಿಂದಾಗಿ ರೈತರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರೈತರಿಗೆ ಐದು ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ವಿಶೇಷವಾಗಿ ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯ ಭತ್ತ ಬೆಳೆಯುವ ರೈತರಿಗೆ ಏಳು ಗಂಟೆ ವಿದ್ಯುತ್ ನೀಡಲು ಆದೇಶಿಸಿದೆ. ಸುಮಾರು 2 ಸಾವಿರ ಮೆಗಾ ವ್ಯಾಟ್ ವರೆಗೆ ವಿದ್ಯುತ್ ಖರೀದಿ ಮಾಡಬೇಕಾಗಿದೆ. ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕಲ್ಲಿದ್ದಲ್ಲಿನ ಗುಣಮಟ್ಟದ ಮೇಲೆ ವಿದ್ಯುತ್ ಉತ್ಪಾದನೆಯ ಪ್ರಮಾಣ ನಿಗದಿಯಾಗುತ್ತದೆ. ಅದರಲ್ಲಿ ಕೆಲವೊಮ್ಮೆ 50 ರಿಂದ 60 ಮೆ.ವ್ಯಾ ವಿದ್ಯುತ್ ಮಾತ್ರ ಉತ್ಪಾದನೆ ಸಾಧ್ಯವಾಗುತ್ತದೆ ಎಂದು ಹೇಳಿದರು.
2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…