ಜನರಿಗೆ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಹಾಗೂ ಮೇವು ಬೆಳೆಯಲು ಹಾಗೂ ಸಂಗ್ರಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.
ಈ ಬಾರಿ ಮಳೆಯ ಅಭಾವದಿಂದಾಗಿ ರೈತರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರೈತರಿಗೆ ಐದು ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ವಿಶೇಷವಾಗಿ ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಯ ಭತ್ತ ಬೆಳೆಯುವ ರೈತರಿಗೆ ಏಳು ಗಂಟೆ ವಿದ್ಯುತ್ ನೀಡಲು ಆದೇಶಿಸಿದೆ. ಸುಮಾರು 2 ಸಾವಿರ ಮೆಗಾ ವ್ಯಾಟ್ ವರೆಗೆ ವಿದ್ಯುತ್ ಖರೀದಿ ಮಾಡಬೇಕಾಗಿದೆ. ಕೋಜನರೇಶನ್ ವ್ಯವಸ್ಥೆಯ ಮೂಲಕ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕಲ್ಲಿದ್ದಲ್ಲಿನ ಗುಣಮಟ್ಟದ ಮೇಲೆ ವಿದ್ಯುತ್ ಉತ್ಪಾದನೆಯ ಪ್ರಮಾಣ ನಿಗದಿಯಾಗುತ್ತದೆ. ಅದರಲ್ಲಿ ಕೆಲವೊಮ್ಮೆ 50 ರಿಂದ 60 ಮೆ.ವ್ಯಾ ವಿದ್ಯುತ್ ಮಾತ್ರ ಉತ್ಪಾದನೆ ಸಾಧ್ಯವಾಗುತ್ತದೆ ಎಂದು ಹೇಳಿದರು.
2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…