Categories: ಕೃಷಿ

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ.

ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize ಮಾಡುವುದು ಅತಿ ಮುಖ್ಯವಾಗಿರುತ್ತದೆ ಹಾಗೂ ಇದರೊಂದಿಗೆ FRUITS (State Farmer Registry) ತಂತ್ರಾಂಶದಲ್ಲಿ ರೈತರ e-KYC ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ (Digital Farmer Consent With e- Sign ) ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (Central Farmer ID) ಸೃಜಿಸಲಾಗುತ್ತದೆ, ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಲಾಗುತ್ತದೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆ (Central Farmer ID)ಯು ಕಡ್ಡಾಯವಾಗಿರುತ್ತದೆ.

ಆದುದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ /ಗ್ರಾಮ ಓನ್ ಕೇಂದ್ರ /ಕಂದಾಯ/ ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖಾ/ ಕಚೇರಿಗಳನ್ನು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ಇದೇ ಫೆಬ್ರವರಿ. 26 ರ ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸುವುದು.

ರೈತರ ವಿದ್ಯುನ್ಮಾನ ಸಹಮತಿ ಪತ್ರ (Digital Farmer Consent With e-Sign) ನೀಡುವುದು. ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ FID ಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ ತಪ್ಪಿದಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಿರೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

4 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

4 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

9 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago