Categories: ಕೃಷಿ

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ.

ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize ಮಾಡುವುದು ಅತಿ ಮುಖ್ಯವಾಗಿರುತ್ತದೆ ಹಾಗೂ ಇದರೊಂದಿಗೆ FRUITS (State Farmer Registry) ತಂತ್ರಾಂಶದಲ್ಲಿ ರೈತರ e-KYC ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ (Digital Farmer Consent With e- Sign ) ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (Central Farmer ID) ಸೃಜಿಸಲಾಗುತ್ತದೆ, ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಲಾಗುತ್ತದೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆ (Central Farmer ID)ಯು ಕಡ್ಡಾಯವಾಗಿರುತ್ತದೆ.

ಆದುದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ /ಗ್ರಾಮ ಓನ್ ಕೇಂದ್ರ /ಕಂದಾಯ/ ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖಾ/ ಕಚೇರಿಗಳನ್ನು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ಇದೇ ಫೆಬ್ರವರಿ. 26 ರ ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸುವುದು.

ರೈತರ ವಿದ್ಯುನ್ಮಾನ ಸಹಮತಿ ಪತ್ರ (Digital Farmer Consent With e-Sign) ನೀಡುವುದು. ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ FID ಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ ತಪ್ಪಿದಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಿರೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

Immediate Gambling Establishment Play: The Practical Way to Delight In Online Gambling

For passionate casino enthusiasts and wagering lovers, on-line gambling establishments have changed the means we…

3 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

3 hours ago

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

13 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

23 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

Instant Play Casino

Instant play casinos allow you to play casino games online without installing any software. These…

2 days ago