Categories: ಕೃಷಿ

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ.

ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize ಮಾಡುವುದು ಅತಿ ಮುಖ್ಯವಾಗಿರುತ್ತದೆ ಹಾಗೂ ಇದರೊಂದಿಗೆ FRUITS (State Farmer Registry) ತಂತ್ರಾಂಶದಲ್ಲಿ ರೈತರ e-KYC ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ (Digital Farmer Consent With e- Sign ) ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (Central Farmer ID) ಸೃಜಿಸಲಾಗುತ್ತದೆ, ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಲಾಗುತ್ತದೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆ (Central Farmer ID)ಯು ಕಡ್ಡಾಯವಾಗಿರುತ್ತದೆ.

ಆದುದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ /ಗ್ರಾಮ ಓನ್ ಕೇಂದ್ರ /ಕಂದಾಯ/ ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖಾ/ ಕಚೇರಿಗಳನ್ನು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ಇದೇ ಫೆಬ್ರವರಿ. 26 ರ ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸುವುದು.

ರೈತರ ವಿದ್ಯುನ್ಮಾನ ಸಹಮತಿ ಪತ್ರ (Digital Farmer Consent With e-Sign) ನೀಡುವುದು. ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ FID ಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ ತಪ್ಪಿದಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಿರೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

2 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

5 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

7 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

19 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago