Categories: ಕೃಷಿ

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ.

ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize ಮಾಡುವುದು ಅತಿ ಮುಖ್ಯವಾಗಿರುತ್ತದೆ ಹಾಗೂ ಇದರೊಂದಿಗೆ FRUITS (State Farmer Registry) ತಂತ್ರಾಂಶದಲ್ಲಿ ರೈತರ e-KYC ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ (Digital Farmer Consent With e- Sign ) ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (Central Farmer ID) ಸೃಜಿಸಲಾಗುತ್ತದೆ, ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಲಾಗುತ್ತದೆ.

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಹಾಗೂ ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆ (Central Farmer ID)ಯು ಕಡ್ಡಾಯವಾಗಿರುತ್ತದೆ.

ಆದುದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ /ಗ್ರಾಮ ಓನ್ ಕೇಂದ್ರ /ಕಂದಾಯ/ ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖಾ/ ಕಚೇರಿಗಳನ್ನು ತಮ್ಮ ಆಧಾರ್ ಕಾರ್ಡ್, ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ಇದೇ ಫೆಬ್ರವರಿ. 26 ರ ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸುವುದು.

ರೈತರ ವಿದ್ಯುನ್ಮಾನ ಸಹಮತಿ ಪತ್ರ (Digital Farmer Consent With e-Sign) ನೀಡುವುದು. ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ FID ಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ ತಪ್ಪಿದಲ್ಲಿ ಕೇಂದ್ರ / ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಿರೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

11 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

11 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

15 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

22 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

23 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

2 days ago