ರೈತರು ಕಡ್ಡಾಯವಾಗಿ “ಫ್ರೂಟ್ಸ್ ” ಅಡಿ ನೋಂದಾಯಿಸಿ ಗುರುತಿನ ಸಂಖ್ಯೆ ಪಡೆಯಲು ಜಿಲ್ಲಾಧಿಕಾರಿ ಸೂಚನೆ

ಫ್ರೂಟ್ಸ್/FRUITS (Farmers Registration and Unified Beneficiary information system) ಕರ್ನಾಟಕ ಸರ್ಕಾರ ಇ-ಆಡಳಿತ ಅಭಿವೃದ್ಧಿ ಪಡಿಸಿರುವ ಪೋರ್ಟಲ್ ಆಗಿದ್ದು, ಕಂದಾಯ ಇಲಾಖೆಯ “ಭೂಮಿ”  ತಂತ್ರಾಂಶದಿಂದ ಸಂಯೋಜಿಸಲಾಗಿದೆ. ರೈತರ ಭೂ ಹಿಡುವಳಿಯ ವಿವರವನ್ನು ವಿಳಾಸ ಮತ್ತು ಬ್ಯಾಂಕ್’ ವಿವರದೊಂದಿಗೆ ನೋಂದಾಯಿಸಿ ರೈತರಿಗೆ ಗುರುತಿನ ಸಂಖ್ಯೆ/FID(Farmers ID) ನೀಡಲಾಗುವುದು.

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಫ್ರೂಟ್ಸ್ ಪೋರ್ಟಲ್ ನಲ್ಲಿ ನೋಂದಣಿ ಅಗತ್ಯವಾಗಿದ್ದು, ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ FID ಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ FID ಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆ‌ ಮತ್ತು ರೇಷ್ಮೆ ಇಲಾಖೆಯನ್ನು ಸಂಪರ್ಕಿಸಿ ಫ್ರೂಟ್ಸ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವುದು.

FID ಮಾಡಿಸಲು ಕಡ್ಡಾಯವಾಗಿದ್ದು ರೈತರು ಕೆಳಕಂಡ ದಾಖಲಾತಿಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.

1. ರೈತರ ಆಧಾರ್ ಕಾರ್ಡ್ ಪ್ರತಿ

2. ಬ್ಯಾಂಕ್‌ ಖಾತೆ ಪುಸ್ತಕದ ಪ್ರತಿ

3. ತಮ್ಮ ಹೆಸರಿನಲ್ಲಿರುವ ಜಮೀನುಗಳ ಪಹಣಿ ಪತ್ರಿಕೆಗಳು

4. ತಮ್ಮ ಮೊಬೈಲ್ ಸಂಖ್ಯೆ

5. ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ)

6. ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರ.

ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದಾಗ ರೈತರು ತಮ್ಮ ಜಮೀನಿನ ವಿವರಗಳು ಫ್ರೂಟ್ ತಂತ್ರಾಂಶದಲ್ಲಿ ಸೇರ್ಪಡೆಯಾಗದಿದ್ದಲ್ಲಿ ಮೇಲೆ ತಿಳಿಸಿರುವ ದಾಖಲೆಗಳನ್ನು ನೀಡಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago