ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು
ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು.
ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.
*ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ*
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.
ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.
ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು.
ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…