ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು- ಸಚಿವ ಕೆ.ಎಚ್ ಮುನಿಯಪ್ಪ

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

*ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ*
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.

ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.

ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು.

ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

4 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

4 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

11 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

21 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

22 hours ago