ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು- ಸಚಿವ ಕೆ.ಎಚ್ ಮುನಿಯಪ್ಪ

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

*ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ*
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.

ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.

ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು.

ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

5 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

15 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago