ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು- ಸಚಿವ ಕೆ.ಎಚ್ ಮುನಿಯಪ್ಪ

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

*ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ*
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.

ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.

ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು.

ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

40 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

22 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago