ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು- ಸಚಿವ ಕೆ.ಎಚ್ ಮುನಿಯಪ್ಪ

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

*ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ*
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.

ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.

ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು.

ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

5 hours ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

5 hours ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

8 hours ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

8 hours ago

ಕೆಂಪೇಗೌಡರ ಪುತ್ಥಳಿ ಭೂಮಿಪೂಜೆ ಗೊಂದಲ ವಿಚಾರ: ಕಾನೂನುಬದ್ಧವಾಗಿಯೇ ಕಾರ್ಯ ನಡೆದಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ – ಬಾಶೆಟ್ಟಿಹಳ್ಳಿ ಪಪಂ ಅಧ್ಯಕ್ಷ ಪ್ರೇಮ್ ಕುಮಾರ್ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…

9 hours ago

ಬ್ಯಾಟರಿ ಸ್ಪಾರ್ಕ್: ಧಗಧಗ ಹೊತ್ತಿ ಉರಿದ ಟಾಟಾ ಸುಮೋ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…

11 hours ago