ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು- ಸಚಿವ ಕೆ.ಎಚ್ ಮುನಿಯಪ್ಪ

ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನಲ್ಲಿ ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಹಮ್ಮಿಕೊಳ್ಳಲಾದ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

*ಪಂಚಾಯಿತಿಗಳು ಶಾಶ್ವತ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ*
ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಪಂಚಾಯಿತಿಗಳಿಗೆ ಆದಾಯ ಬರುವಂತಹ ಅತ್ಯುತ್ತಮ ಕೆಲಸ ಮಾಡಿದ್ದೀರಿ, ಆದಾಯದ ಸದ್ಬಳಕೆಯಿಂದ ಗ್ರಾಮಗಳಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ, ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಹಣದ ಸದುಪಯೋಗ ಪಡೆದುಕೊಂಡರೆ ಗ್ರಾಮ, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದರು.

ರೈತರು ಕೃಷಿ ಚಟುವಟಿಕೆಗಳೊಂದಿಗೆ ಹಾಲು ಉತ್ಪಾದನೆ, ರೇಷ್ಮೆ ಉತ್ಪಾದನೆಯಲ್ಲಿ ತೊಡಗಬೇಕು. ಹಾಲು ಉತ್ಪಾದನೆಯಿಂದ 15 ದಿನಕ್ಕೆ ಹಣ ಸಿಗುತ್ತದೆ, ರೇಷ್ಮೆ ಉತ್ಪಾದನೆಯಲ್ಲಿ ತಿಂಗಳಿಗೆ ಹಣ ಸಿಗುತ್ತದೆ. ಇವೆರಡೂ ಕೂಡ ಲಾಭದಾಯಕ ಕೆಲಸಗಳು ಎಂದರು.

ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 9 ನೂತನ ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು 98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ಒಂದು ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಎಂದು ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದರು.

ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

8 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

8 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

11 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago