Categories: ಧಾರವಾಡ

ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ- ಸಿಎಂ ಸಿದ್ದರಾಮಯ್ಯ

ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ. ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ ಸಂಪತ್ತಿನಲ್ಲಿ ಶೇ.90 ರಷ್ಟು ಕೇವಲ 10 ಜನರ ಕೈಯಲ್ಲಿದೆ. ಇದು ತಪ್ಪು. ಶ್ರಮಿಕರ ದುಡಿಮೆಯ ಸಂಪತ್ತು ಎಲ್ಲರಲ್ಲೂ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ದೃಷ್ಟಿಯಿಂದ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525 ವಿಶೇಷ ಚೇತನ ಮಕ್ಕಳಿಗೆ ತ್ರಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ, ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.

ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ನಾಡಿನ 4 ಕೋಟಿ ರೈತರು, ಕಾರ್ಮಿಕರು, ಬಡವರಿಗೆ ಅನುಕೂಲ ಆಗುತ್ತಿದೆ ಎಂದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ, ಬಡತನಕ್ಕೆ ಮಿಡಿಯುವ ಹೃದಯ. ಈ ಕಾರಣಕ್ಕೇ ಇವರಿಗೆ ಕಾರ್ಮಿಕ ಇಲಾಖೆ ಸಚಿವರನ್ನಾಗಿ ಮಾಡಿದ್ದೇನೆ. ಸಂತೋಷ್ ಲಾಡ್ ಅವರ ಕಾಳಜಿಯಿಂದ CSR ನಿಧಿ ಮತ್ತು ಕಾರ್ಮಿಕ ಇಲಾಖೆ ಮೂಲಕ 525 ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದ್ದಾರೆ. ಇದು ನನಗೆ ಬಹಳ ಸಂತೋಷ ತಂದಿದೆ ಎಂದು ಹೇಳಿದರು.

ಬಸವಾದಿ ಶರಣರು ಕಾಯಕ, ದಾಸೋಹ ಎಂದು ಕರೆದದ್ದು ಇದನ್ನೇ. ಉತ್ಪಾದನೆಯ ಸಮಾನ ಹಂಚಿಕೆಯೇ ಕಾಯಕ ಮತ್ತು ದಾಸೋಹ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಅಳಿಸಬಹುದು. ಅಂಬೇಡ್ಕರ್ ಅವರೂ ಆರ್ಥಿಕ, ಸಾಮಾಜಿಕ‌ ಅಸಮಾನತೆ ತೊಡೆಯಲು ಹೋರಾಡಿದ್ದರು. ಅಸಮಾನತೆಗೆ ಸಿಲುಕಿದವರು ಪ್ರಜಾಪ್ರಭುತ್ವದ ಸೌಧವನ್ನು ನಾಶಮಾಡಬಹುದು ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ನೀಡಿದ್ದರು ಎಂದರು.

ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ಶ್ರಮಿಕರಿಗೆ ಅನುಕೂಲ ಕಲ್ಪಿಸಬೇಕು ಎನ್ನುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

2 minutes ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

55 minutes ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

7 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

8 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

13 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago