ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ. ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ ಸಂಪತ್ತಿನಲ್ಲಿ ಶೇ.90 ರಷ್ಟು ಕೇವಲ 10 ಜನರ ಕೈಯಲ್ಲಿದೆ. ಇದು ತಪ್ಪು. ಶ್ರಮಿಕರ ದುಡಿಮೆಯ ಸಂಪತ್ತು ಎಲ್ಲರಲ್ಲೂ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ದೃಷ್ಟಿಯಿಂದ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525 ವಿಶೇಷ ಚೇತನ ಮಕ್ಕಳಿಗೆ ತ್ರಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ, ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.
ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ನಾಡಿನ 4 ಕೋಟಿ ರೈತರು, ಕಾರ್ಮಿಕರು, ಬಡವರಿಗೆ ಅನುಕೂಲ ಆಗುತ್ತಿದೆ ಎಂದರು.
ಬಸವಾದಿ ಶರಣರು ಕಾಯಕ, ದಾಸೋಹ ಎಂದು ಕರೆದದ್ದು ಇದನ್ನೇ. ಉತ್ಪಾದನೆಯ ಸಮಾನ ಹಂಚಿಕೆಯೇ ಕಾಯಕ ಮತ್ತು ದಾಸೋಹ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಅಳಿಸಬಹುದು. ಅಂಬೇಡ್ಕರ್ ಅವರೂ ಆರ್ಥಿಕ, ಸಾಮಾಜಿಕ ಅಸಮಾನತೆ ತೊಡೆಯಲು ಹೋರಾಡಿದ್ದರು. ಅಸಮಾನತೆಗೆ ಸಿಲುಕಿದವರು ಪ್ರಜಾಪ್ರಭುತ್ವದ ಸೌಧವನ್ನು ನಾಶಮಾಡಬಹುದು ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ನೀಡಿದ್ದರು ಎಂದರು.
ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ಶ್ರಮಿಕರಿಗೆ ಅನುಕೂಲ ಕಲ್ಪಿಸಬೇಕು ಎನ್ನುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದು ತಿಳಿಸಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…