ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ. ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ ಸಂಪತ್ತಿನಲ್ಲಿ ಶೇ.90 ರಷ್ಟು ಕೇವಲ 10 ಜನರ ಕೈಯಲ್ಲಿದೆ. ಇದು ತಪ್ಪು. ಶ್ರಮಿಕರ ದುಡಿಮೆಯ ಸಂಪತ್ತು ಎಲ್ಲರಲ್ಲೂ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ದೃಷ್ಟಿಯಿಂದ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525 ವಿಶೇಷ ಚೇತನ ಮಕ್ಕಳಿಗೆ ತ್ರಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ, ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.
ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ನಾಡಿನ 4 ಕೋಟಿ ರೈತರು, ಕಾರ್ಮಿಕರು, ಬಡವರಿಗೆ ಅನುಕೂಲ ಆಗುತ್ತಿದೆ ಎಂದರು.
ಬಸವಾದಿ ಶರಣರು ಕಾಯಕ, ದಾಸೋಹ ಎಂದು ಕರೆದದ್ದು ಇದನ್ನೇ. ಉತ್ಪಾದನೆಯ ಸಮಾನ ಹಂಚಿಕೆಯೇ ಕಾಯಕ ಮತ್ತು ದಾಸೋಹ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಅಳಿಸಬಹುದು. ಅಂಬೇಡ್ಕರ್ ಅವರೂ ಆರ್ಥಿಕ, ಸಾಮಾಜಿಕ ಅಸಮಾನತೆ ತೊಡೆಯಲು ಹೋರಾಡಿದ್ದರು. ಅಸಮಾನತೆಗೆ ಸಿಲುಕಿದವರು ಪ್ರಜಾಪ್ರಭುತ್ವದ ಸೌಧವನ್ನು ನಾಶಮಾಡಬಹುದು ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ನೀಡಿದ್ದರು ಎಂದರು.
ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ಶ್ರಮಿಕರಿಗೆ ಅನುಕೂಲ ಕಲ್ಪಿಸಬೇಕು ಎನ್ನುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದು ತಿಳಿಸಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…