ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ. ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ ಸಂಪತ್ತಿನಲ್ಲಿ ಶೇ.90 ರಷ್ಟು ಕೇವಲ 10 ಜನರ ಕೈಯಲ್ಲಿದೆ. ಇದು ತಪ್ಪು. ಶ್ರಮಿಕರ ದುಡಿಮೆಯ ಸಂಪತ್ತು ಎಲ್ಲರಲ್ಲೂ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ದೃಷ್ಟಿಯಿಂದ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525 ವಿಶೇಷ ಚೇತನ ಮಕ್ಕಳಿಗೆ ತ್ರಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ, ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.
ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ನಾಡಿನ 4 ಕೋಟಿ ರೈತರು, ಕಾರ್ಮಿಕರು, ಬಡವರಿಗೆ ಅನುಕೂಲ ಆಗುತ್ತಿದೆ ಎಂದರು.
ಬಸವಾದಿ ಶರಣರು ಕಾಯಕ, ದಾಸೋಹ ಎಂದು ಕರೆದದ್ದು ಇದನ್ನೇ. ಉತ್ಪಾದನೆಯ ಸಮಾನ ಹಂಚಿಕೆಯೇ ಕಾಯಕ ಮತ್ತು ದಾಸೋಹ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಅಳಿಸಬಹುದು. ಅಂಬೇಡ್ಕರ್ ಅವರೂ ಆರ್ಥಿಕ, ಸಾಮಾಜಿಕ ಅಸಮಾನತೆ ತೊಡೆಯಲು ಹೋರಾಡಿದ್ದರು. ಅಸಮಾನತೆಗೆ ಸಿಲುಕಿದವರು ಪ್ರಜಾಪ್ರಭುತ್ವದ ಸೌಧವನ್ನು ನಾಶಮಾಡಬಹುದು ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ನೀಡಿದ್ದರು ಎಂದರು.
ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ಶ್ರಮಿಕರಿಗೆ ಅನುಕೂಲ ಕಲ್ಪಿಸಬೇಕು ಎನ್ನುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ..…