ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…