Categories: ಕೋಲಾರ

ರೈತರು, ಮಹಿಳೆಯರ ಅಭಿವೃದ್ಧಿಯೇ ನಮ್ಮ ಗುರಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿ ಇರಲ್ಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿಪ್ರಾಯಗಳನ್ನು ಪಡೆದು ಪ್ರತಿಯೊಂದು ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ನರೇಗಾ ಸೇರಿದಂತೆ ವಿವಿಧ ಯೋಜನೆಗಳು ಕುರಿತಂತೆ ಪಂಚಾಯತಿ ಮಟ್ಟದ ಅಧಿಕಾರಿಗಳು ಹಳ್ಳಿಗಳಿಗೆ ಹೋಗಿ ಸಾರ್ವಜನಿಕರಿಗೆ ಮನವರಿಕೆಯ ಜೊತೆಗೆ ಯೋಜನೆಗಳ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ಪ್ರಾಸ್ತಾವಿಕವಾಗಿ ಮಾತನಾಡಿ ಜಲಾನಯನ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಿಲ್ಲೆಯ ಕೋಲಾರ ತಾಲೂಕಿನ ಐದು ಪಂಚಾಯಿತಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಅಂತರ್ಜಲವನ್ನು ವೃದ್ಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಇದರ ಸದುಪಯೋಗವನ್ನು ರೈತರು ಪಡಿಸಿಕೊಂಡು ಅಧಿಕಾರಿಗಳೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

1 hour ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago