ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…