ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…