Categories: ಕೋಲಾರ

ರೈತರು, ಮಹಿಳೆಯರ ಅಭಿವೃದ್ಧಿಯೇ ನಮ್ಮ ಗುರಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿ ಇರಲ್ಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿಪ್ರಾಯಗಳನ್ನು ಪಡೆದು ಪ್ರತಿಯೊಂದು ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ನರೇಗಾ ಸೇರಿದಂತೆ ವಿವಿಧ ಯೋಜನೆಗಳು ಕುರಿತಂತೆ ಪಂಚಾಯತಿ ಮಟ್ಟದ ಅಧಿಕಾರಿಗಳು ಹಳ್ಳಿಗಳಿಗೆ ಹೋಗಿ ಸಾರ್ವಜನಿಕರಿಗೆ ಮನವರಿಕೆಯ ಜೊತೆಗೆ ಯೋಜನೆಗಳ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ಪ್ರಾಸ್ತಾವಿಕವಾಗಿ ಮಾತನಾಡಿ ಜಲಾನಯನ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಿಲ್ಲೆಯ ಕೋಲಾರ ತಾಲೂಕಿನ ಐದು ಪಂಚಾಯಿತಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಅಂತರ್ಜಲವನ್ನು ವೃದ್ಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಇದರ ಸದುಪಯೋಗವನ್ನು ರೈತರು ಪಡಿಸಿಕೊಂಡು ಅಧಿಕಾರಿಗಳೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago