Categories: ಕೋಲಾರ

ರೈತರು, ಮಹಿಳೆಯರ ಅಭಿವೃದ್ಧಿಯೇ ನಮ್ಮ ಗುರಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿ ಇರಲ್ಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿಪ್ರಾಯಗಳನ್ನು ಪಡೆದು ಪ್ರತಿಯೊಂದು ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ನರೇಗಾ ಸೇರಿದಂತೆ ವಿವಿಧ ಯೋಜನೆಗಳು ಕುರಿತಂತೆ ಪಂಚಾಯತಿ ಮಟ್ಟದ ಅಧಿಕಾರಿಗಳು ಹಳ್ಳಿಗಳಿಗೆ ಹೋಗಿ ಸಾರ್ವಜನಿಕರಿಗೆ ಮನವರಿಕೆಯ ಜೊತೆಗೆ ಯೋಜನೆಗಳ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ಪ್ರಾಸ್ತಾವಿಕವಾಗಿ ಮಾತನಾಡಿ ಜಲಾನಯನ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಿಲ್ಲೆಯ ಕೋಲಾರ ತಾಲೂಕಿನ ಐದು ಪಂಚಾಯಿತಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಅಂತರ್ಜಲವನ್ನು ವೃದ್ಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಇದರ ಸದುಪಯೋಗವನ್ನು ರೈತರು ಪಡಿಸಿಕೊಂಡು ಅಧಿಕಾರಿಗಳೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago