ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…