Categories: ಕೋಲಾರ

ರೈತರು, ಮಹಿಳೆಯರ ಅಭಿವೃದ್ಧಿಯೇ ನಮ್ಮ ಗುರಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರೈತರು, ಮಹಿಳೆಯರು ಅಭಿವೃದ್ಧಿಯಾದರೆ ಮಾತ್ರವೇ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಕಾಣಲು ಸಾಧ್ಯ. ಅದಕ್ಕಾಗಿಯೇ ಸರಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಢಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಶೆಟ್ಟಿಕೊತ್ತನೂರು ಗ್ರಾಮದಲ್ಲಿ ಶನಿವಾರ ಜಿಪಂ, ತಾಪಂ, ಕೃಷಿ ಇಲಾಖೆಯ ವತಿಯಿಂದ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಯೋಜನೆಯಿಂದ ಸುಮಾರು 642 ಲಕ್ಷಗಳ ಕಾಮಗಾರಿಗಳನ್ನು ಉದ್ಘಾಟಿಸ ಮಾತನಾಡಿದ ಅವರು, ಕೋಲಾರ ಜಿಲ್ಲೆಯಲ್ಲಿ ಸುಮಾರು 1700ಕ್ಕು ಹೆಚ್ಚಿನ ಅಡಿಗಳಿಂದ ನೀರು ತಂದು ಕೃಷಿ ಮಾಡುವ ರೈತರು ಮೊಗದಲ್ಲಿ ಮೊದಲು ಖುಷಿ ತರುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಅನಿಟ್ಟಿನಲ್ಲಿ ಸರಕಾರದಿಂದ ವಿವಿಧ ಇಲಾಖೆಗಳಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುವಂತಾಗಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿಗೆ ಅನುದಾನದಲ್ಲಿ ಕೊರತೆಯಿಲ್ಲ ಗ್ರಾಪಂ ಅಧ್ಯಕ್ಷರಿಗೂ ದೇಶದ ರಾಷ್ಟ್ರಪತಿಗಳಿಗೂ ಒಂದೇ ಅಧಿಕಾರವಿರುತ್ತದೆ ಅದನ್ನು ಮೊದಲು ಪಿಡಿಒಗಳು ಅರ್ಥಮಾಡಿಕೊಳ್ಳಬೇಕು ಅವರನ್ನು ನಿರ್ಲಕ್ಷ್ಯ ಮಾಡಿದರೆ ಪರಿಣಾಮ ಸರಿ ಇರಲ್ಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿಪ್ರಾಯಗಳನ್ನು ಪಡೆದು ಪ್ರತಿಯೊಂದು ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ನರೇಗಾ ಸೇರಿದಂತೆ ವಿವಿಧ ಯೋಜನೆಗಳು ಕುರಿತಂತೆ ಪಂಚಾಯತಿ ಮಟ್ಟದ ಅಧಿಕಾರಿಗಳು ಹಳ್ಳಿಗಳಿಗೆ ಹೋಗಿ ಸಾರ್ವಜನಿಕರಿಗೆ ಮನವರಿಕೆಯ ಜೊತೆಗೆ ಯೋಜನೆಗಳ ಅರಿವು ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕೆಳೆಗೆ ಹೋಗಿದ್ದು ಅದಕ್ಕಾಗಿ ನೀರಿನ ಮಟ್ಟ ಮೇಲಕ್ಕೆ ತರಲು ಸರಕಾರಗಳು ಸತತ ಪ್ರಯತ್ನಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ರೈತರು ತಮ್ಮ ಜಮೀನುಗಳಲ್ಲಿ ಮಣ್ಣಿನ ಮತ್ತು ನೀರಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಅದಕ್ಕೆ ಪೂರಕವಾದ ಅಂಶಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಜಿಲ್ಲೆಯಲ್ಲಿ ಹೈನುಗಾರಿಕೆ, ರೇಷ್ಮೆ ಇತ್ಯಾದಿಗಳ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ಪ್ರಾಸ್ತಾವಿಕವಾಗಿ ಮಾತನಾಡಿ ಜಲಾನಯನ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಿಲ್ಲೆಯ ಕೋಲಾರ ತಾಲೂಕಿನ ಐದು ಪಂಚಾಯಿತಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಅಂತರ್ಜಲವನ್ನು ವೃದ್ಧಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಇದರ ಸದುಪಯೋಗವನ್ನು ರೈತರು ಪಡಿಸಿಕೊಂಡು ಅಧಿಕಾರಿಗಳೊಂದಿಗೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೃಷಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಯಂತ್ರೋಪಕರಣಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮುದುವತ್ತಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ ಹನುಮಂತಪ್ಪ, ಬೆಗ್ಲಿಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ದೀಪಿಕಾ ಲೋಕೇಶ್, ಅರಾಭಿಕೊತ್ತನೂರು ಗ್ರಾಪಂ ಅಧ್ಯಕ್ಷೆ ರೇಣುಕಾ ಮುನಿರಾಜು, ಕೃಷಿ ಇಲಾಖೆಯ ಭವ್ಯರಾಣಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಕಲ್ಲಂಡೂರು ಲೋಕೇಶ್, ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ಅಮರನಾಥ್’ ಮಣ್ಣು ವಿಜ್ಞಾನಿ ಅನಿಲ್ ಕುಮಾರ್ ಪಿಡಿಒ ರವಿ, ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

7 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

7 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

7 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

7 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

10 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

14 hours ago