ರೈತರು ವ್ಯವಸಾಯ ಮಾಡುವ ಜಾಗದಲ್ಲಿ ವಸತಿ ಯೋಜನೆ ರೂಪಿಸಲು ನಿರ್ಧಾರ- ರೈತ ಲಕ್ಷ್ಮೀಗೌಡ ಆರೋಪ

ಸ್ಥಳೀಯ ಅಧಿಕಾರಿಗಳು ಬೇಕಂತಲೇ ನಮ್ಮನ್ನು ಒಕ್ಕಲೆಬ್ಬಿಸುವ ಸಲುವಾಗಿ ವಸತಿ ಯೋಜನೆಯನ್ನು ರೂಪಿಸಿದ್ದು, ಕೂಡಲೇ ಯೋಜನೆ ರದ್ದುಗೊಳಿಸಿ ಸದರಿ ಜಾಗದಲ್ಲಿ ರೈತರು ವ್ಯವಸಾಯ ಮಾಡಲು ಅನುವು ಮಾಡಿಕೊಡಬೇಕೆಂದು ಕೂಗೋನಹಳ್ಳಿ ಗ್ರಾಮದ ರೈತ ಲಕ್ಷ್ಮೀಗೌಡ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಗೋನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ. 67ರ ಗೋಮಾಳ ಜಮೀನಿನಲ್ಲಿ ನಾವುಗಳು ಸುಮಾರು 25 ವರ್ಷಗಳಿಂದ ರಾಗಿ, ಜೋಳ, ಅವರೆ, ಇತ್ಯಾದಿ ಬೆಳೆಗಳನ್ನು ಬೆಳೆದುಕೊಂಡು ಬರುತ್ತಿದ್ದು, ಫಾರಂ-57ರ ಅಡಿಯಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿಯನ್ನು ಸಹ ಸಲ್ಲಿಸಿರುತ್ತೇವೆ. ಗ್ರಾಮ ಲೆಕ್ಕಾಧಿಕಾರಿಗಳು, ರೆವಿನ್ಯೂ ಇನ್ಸ್‌ಪೆಕ್ಟರ್ ಜಮೀನು ಸರ್ವೆ ಮಾಡಲು ಅನುಮತಿ ಪತ್ರವನ್ನು ನೀಡಿರುತ್ತಾರೆ. ಆದರೆ, ನಮಗೆ ಗೊತ್ತಿಲ್ಲದೆ ನಮ್ಮ ಜಮೀನನ್ನು ರಾಜೀವ್ ಗಾಂದಿ ವಸತಿ ಯೋಜನೆಗೆ ಪಹಣಿ ಮಾಡಲಾಗಿದೆ. ಆದರೆ, ಈ ಜಮೀನಿನಲ್ಲಿ ಬೃಹತ್ ವಿದ್ಯುತ್ ತಂತಿಗಳು ಹಾಗೂ ಕಂಬ ಇರುವ ಕಾರಣ ಸದರಿ ಸ್ಥಳವು ಯಾವುದೇ ವಸತಿ ಯೋಜನೆಗೆ ಲಾಯಕ್ಕಾದ ಜಮೀನು ಅಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ತಿಳಿಸಿದೆ ಎಂದರು.

ವಸತಿ ಯೋಜನೆಗೆ ಸೂಕ್ತವಲ್ಲದ ಜಮೀನಿನಲ್ಲಿ ನಾವು ವ್ಯವಸಾಯ ಮಾಡುತ್ತಿದ್ದು, ಜಮೀನಿನಲ್ಲಿ ಬೃಹತ್ ವಿದ್ಯುತ್ ಲೈನ್ ಗಳು ಹಾಗೂ ಕಂಬವಿರುವುದರಿಂದ ಸದರಿ ಜಾಗವು ವಸತಿ ಯೋಜನೆಗೆ ಸೂಕ್ತವಾಗಿರುವುದಿಲ್ಲ, ವಿದ್ಯುತ್ ನಿಯಮ 2010ರ ಅನುಬಂದದ ಪ್ರಕಾರ ಪ್ರಸ್ತುತ ಓವರ್ ಹೆಡ್ ವಿದ್ಯುತ್ ತಂತಿಗಳ ಕೆಳಗೆ ಯಾವುದೇ ಕಟ್ಟಡ ಲೇಔಟ್, ಶಾಲೆಗಳು ದೇವಸ್ಥಾನಗಳು, ವಾಸಕ್ಕೆ ಸುರಕ್ಷಿತವಾದ ಸ್ಥಳಗಳಾಗಿರುವುದಿಲ್ಲ. ವ್ಯವಸಾಯವನ್ನು ಬಿಟ್ಟು ಯಾವುದೇ ರೀತಿಯ ಲೇಔಟ್ ವಸತಿ ಯೋಜನೆಗೆ ರೂಪಿಸಿದರೆ ಅದು ಕಾನೂನು ಬಾಹಿರವಾಗಿರುತ್ತದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ತಿಳಿಸಿದೆ, ನಾವು ವ್ಯವಸಾಯ ಮಾಡುತ್ತಿರುವ ಜಮೀನಿನಲ್ಲಿ ಯಾವುದೇ ರೀತಿಯ ಕಟ್ಟಡ ಲೇಔಟ್ ಮಾಡಲು ವಿದ್ಯುತ್ ಬೃಹತ್ ಲೈನ್‌ಗಳು ಮತ್ತು ಕಂಬವಿರುವುದರಿಂದ ವಸತಿ ಯೋಜನೆಗೆ ರೂಪಿಸಿರುವ ಯೋಜನೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ನಾವು ಸ್ವಾಧೀನದಲ್ಲಿರುವ ಜಮೀನಿನ ಮೇಲೆ ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವೆ ಈ ಪ್ರಕರಣ ಬಾಕಿ ಇದ್ದರೂ ಸಹ ಸಾರ್ವಜನಿಕರಿಗೆ ನಿವೇಶನ ಹಂಚಲು ಸ್ಥಳೀಯ ಅಧಿಕಾರಿಗಳು ಹೊರಟಿದ್ದಾರೆ,ಸದರಿ ಜಮೀನಿನಲ್ಲಿ ನಾವು ವ್ಯವಸಾಯ ಮಾಡುತ್ತಿರುವುದನ್ನು ವಕ್ಕಲೆಬ್ಬಿಸದೆ ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿವೇಶನಗಳ ಹಂಚಿಕೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

13 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

24 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

24 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago