ರೈತರು ವ್ಯವಸಾಯ ಮಾಡುವ ಜಾಗದಲ್ಲಿ ವಸತಿ ಯೋಜನೆ ರೂಪಿಸಲು ನಿರ್ಧಾರ- ರೈತ ಲಕ್ಷ್ಮೀಗೌಡ ಆರೋಪ

ಸ್ಥಳೀಯ ಅಧಿಕಾರಿಗಳು ಬೇಕಂತಲೇ ನಮ್ಮನ್ನು ಒಕ್ಕಲೆಬ್ಬಿಸುವ ಸಲುವಾಗಿ ವಸತಿ ಯೋಜನೆಯನ್ನು ರೂಪಿಸಿದ್ದು, ಕೂಡಲೇ ಯೋಜನೆ ರದ್ದುಗೊಳಿಸಿ ಸದರಿ ಜಾಗದಲ್ಲಿ ರೈತರು ವ್ಯವಸಾಯ ಮಾಡಲು ಅನುವು ಮಾಡಿಕೊಡಬೇಕೆಂದು ಕೂಗೋನಹಳ್ಳಿ ಗ್ರಾಮದ ರೈತ ಲಕ್ಷ್ಮೀಗೌಡ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಗೋನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ. 67ರ ಗೋಮಾಳ ಜಮೀನಿನಲ್ಲಿ ನಾವುಗಳು ಸುಮಾರು 25 ವರ್ಷಗಳಿಂದ ರಾಗಿ, ಜೋಳ, ಅವರೆ, ಇತ್ಯಾದಿ ಬೆಳೆಗಳನ್ನು ಬೆಳೆದುಕೊಂಡು ಬರುತ್ತಿದ್ದು, ಫಾರಂ-57ರ ಅಡಿಯಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿಯನ್ನು ಸಹ ಸಲ್ಲಿಸಿರುತ್ತೇವೆ. ಗ್ರಾಮ ಲೆಕ್ಕಾಧಿಕಾರಿಗಳು, ರೆವಿನ್ಯೂ ಇನ್ಸ್‌ಪೆಕ್ಟರ್ ಜಮೀನು ಸರ್ವೆ ಮಾಡಲು ಅನುಮತಿ ಪತ್ರವನ್ನು ನೀಡಿರುತ್ತಾರೆ. ಆದರೆ, ನಮಗೆ ಗೊತ್ತಿಲ್ಲದೆ ನಮ್ಮ ಜಮೀನನ್ನು ರಾಜೀವ್ ಗಾಂದಿ ವಸತಿ ಯೋಜನೆಗೆ ಪಹಣಿ ಮಾಡಲಾಗಿದೆ. ಆದರೆ, ಈ ಜಮೀನಿನಲ್ಲಿ ಬೃಹತ್ ವಿದ್ಯುತ್ ತಂತಿಗಳು ಹಾಗೂ ಕಂಬ ಇರುವ ಕಾರಣ ಸದರಿ ಸ್ಥಳವು ಯಾವುದೇ ವಸತಿ ಯೋಜನೆಗೆ ಲಾಯಕ್ಕಾದ ಜಮೀನು ಅಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ತಿಳಿಸಿದೆ ಎಂದರು.

ವಸತಿ ಯೋಜನೆಗೆ ಸೂಕ್ತವಲ್ಲದ ಜಮೀನಿನಲ್ಲಿ ನಾವು ವ್ಯವಸಾಯ ಮಾಡುತ್ತಿದ್ದು, ಜಮೀನಿನಲ್ಲಿ ಬೃಹತ್ ವಿದ್ಯುತ್ ಲೈನ್ ಗಳು ಹಾಗೂ ಕಂಬವಿರುವುದರಿಂದ ಸದರಿ ಜಾಗವು ವಸತಿ ಯೋಜನೆಗೆ ಸೂಕ್ತವಾಗಿರುವುದಿಲ್ಲ, ವಿದ್ಯುತ್ ನಿಯಮ 2010ರ ಅನುಬಂದದ ಪ್ರಕಾರ ಪ್ರಸ್ತುತ ಓವರ್ ಹೆಡ್ ವಿದ್ಯುತ್ ತಂತಿಗಳ ಕೆಳಗೆ ಯಾವುದೇ ಕಟ್ಟಡ ಲೇಔಟ್, ಶಾಲೆಗಳು ದೇವಸ್ಥಾನಗಳು, ವಾಸಕ್ಕೆ ಸುರಕ್ಷಿತವಾದ ಸ್ಥಳಗಳಾಗಿರುವುದಿಲ್ಲ. ವ್ಯವಸಾಯವನ್ನು ಬಿಟ್ಟು ಯಾವುದೇ ರೀತಿಯ ಲೇಔಟ್ ವಸತಿ ಯೋಜನೆಗೆ ರೂಪಿಸಿದರೆ ಅದು ಕಾನೂನು ಬಾಹಿರವಾಗಿರುತ್ತದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ತಿಳಿಸಿದೆ, ನಾವು ವ್ಯವಸಾಯ ಮಾಡುತ್ತಿರುವ ಜಮೀನಿನಲ್ಲಿ ಯಾವುದೇ ರೀತಿಯ ಕಟ್ಟಡ ಲೇಔಟ್ ಮಾಡಲು ವಿದ್ಯುತ್ ಬೃಹತ್ ಲೈನ್‌ಗಳು ಮತ್ತು ಕಂಬವಿರುವುದರಿಂದ ವಸತಿ ಯೋಜನೆಗೆ ರೂಪಿಸಿರುವ ಯೋಜನೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ನಾವು ಸ್ವಾಧೀನದಲ್ಲಿರುವ ಜಮೀನಿನ ಮೇಲೆ ಜಿಲ್ಲಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವೆ ಈ ಪ್ರಕರಣ ಬಾಕಿ ಇದ್ದರೂ ಸಹ ಸಾರ್ವಜನಿಕರಿಗೆ ನಿವೇಶನ ಹಂಚಲು ಸ್ಥಳೀಯ ಅಧಿಕಾರಿಗಳು ಹೊರಟಿದ್ದಾರೆ,ಸದರಿ ಜಮೀನಿನಲ್ಲಿ ನಾವು ವ್ಯವಸಾಯ ಮಾಡುತ್ತಿರುವುದನ್ನು ವಕ್ಕಲೆಬ್ಬಿಸದೆ ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿವೇಶನಗಳ ಹಂಚಿಕೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

5 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

8 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

14 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

15 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago