ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ನವೆಂಬರ್ 1 ರಿಂದ ಒಂದು ಲೀಟರ್ ಹಾಲಿಗೆ ರೈತರಿಗೆ ನೀಡಲಾಗುತ್ತಿದ್ದ ₹ 2.10 ಪೈಸೆ ಜೊತೆಗೆ ಡಿ.1 ರಿಂದ ಜಾರಿಗೆ ಬರುವಂತೆ ಮತ್ತೆ ₹ 90 ಪೈಸೆ ಸೇರಿ ₹3 ನೀಡಲಾಗುತ್ತಿದೆ. ಇದರಿಂದ ರೈತರಿಗೆ ಗುಣಮಟ್ಟದ ಆಧಾರದ ಮೇಲೆ ಒಂದು ಲೀಟರ್ ಹಾಲಿಗೆ ಒಟ್ಟು ₹38 ಗಳವರೆಗೂ ದೊರೆಯಲಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.
ಅವರು ಈ ಕುರಿತು ಮಾಹಿತಿ ನೀಡಿ, ಬೆಂಗಳೂರು ಹಾಲು ಒಕ್ಕೂಟಕ್ಕೆ ಪ್ರತಿದಿನ 16 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದೆ. ಇದರಲ್ಲಿ 10 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ರೈತರ ಹಿರಕ್ಷಣೆ ಕಾಪಾಡುವ ಸಲುವಾಗಿ ತಾಲ್ಲೂಕು ಹಾಲು ಉತ್ಪಾದಕರ ಹಿತರಕ್ಷಣಾ ಸಮಿತಿ ರಚಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು, ಅಧ್ಯಕ್ಷರು ಸಮಿತಿಯ ಸದಸ್ಯರಾಗಿರುತ್ತಾರೆ.
ತಾಲ್ಲೂಕಿನ ಪ್ರತಿ ಹೋಬಳಿಯಿಂದ ನಾಲ್ಕು ಜನ ಅಧ್ಯಕ್ಷರು ಸಮಿತಿಯಲ್ಲಿ ನಿರ್ದೇಶಕರಾಗಿರಲಿದ್ದಾರೆ. ಸಮಿತಿಯು ಉತ್ಪಾದಕರ ಹಾಗೂ ಒಕ್ಕೂಟದೊಂದಿಗೆ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ ಎಂದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…