ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ನವೆಂಬರ್ 1 ರಿಂದ ಒಂದು ಲೀಟರ್ ಹಾಲಿಗೆ ರೈತರಿಗೆ ನೀಡಲಾಗುತ್ತಿದ್ದ ₹ 2.10 ಪೈಸೆ ಜೊತೆಗೆ ಡಿ.1 ರಿಂದ ಜಾರಿಗೆ ಬರುವಂತೆ ಮತ್ತೆ ₹ 90 ಪೈಸೆ ಸೇರಿ ₹3 ನೀಡಲಾಗುತ್ತಿದೆ. ಇದರಿಂದ ರೈತರಿಗೆ ಗುಣಮಟ್ಟದ ಆಧಾರದ ಮೇಲೆ ಒಂದು ಲೀಟರ್ ಹಾಲಿಗೆ ಒಟ್ಟು ₹38 ಗಳವರೆಗೂ ದೊರೆಯಲಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.
ಅವರು ಈ ಕುರಿತು ಮಾಹಿತಿ ನೀಡಿ, ಬೆಂಗಳೂರು ಹಾಲು ಒಕ್ಕೂಟಕ್ಕೆ ಪ್ರತಿದಿನ 16 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದೆ. ಇದರಲ್ಲಿ 10 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ರೈತರ ಹಿರಕ್ಷಣೆ ಕಾಪಾಡುವ ಸಲುವಾಗಿ ತಾಲ್ಲೂಕು ಹಾಲು ಉತ್ಪಾದಕರ ಹಿತರಕ್ಷಣಾ ಸಮಿತಿ ರಚಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು, ಅಧ್ಯಕ್ಷರು ಸಮಿತಿಯ ಸದಸ್ಯರಾಗಿರುತ್ತಾರೆ.
ತಾಲ್ಲೂಕಿನ ಪ್ರತಿ ಹೋಬಳಿಯಿಂದ ನಾಲ್ಕು ಜನ ಅಧ್ಯಕ್ಷರು ಸಮಿತಿಯಲ್ಲಿ ನಿರ್ದೇಶಕರಾಗಿರಲಿದ್ದಾರೆ. ಸಮಿತಿಯು ಉತ್ಪಾದಕರ ಹಾಗೂ ಒಕ್ಕೂಟದೊಂದಿಗೆ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…