ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ನವೆಂಬರ್ 1 ರಿಂದ ಒಂದು ಲೀಟರ್ ಹಾಲಿಗೆ ರೈತರಿಗೆ ನೀಡಲಾಗುತ್ತಿದ್ದ ₹ 2.10 ಪೈಸೆ ಜೊತೆಗೆ ಡಿ.1 ರಿಂದ ಜಾರಿಗೆ ಬರುವಂತೆ ಮತ್ತೆ ₹ 90 ಪೈಸೆ ಸೇರಿ ₹3 ನೀಡಲಾಗುತ್ತಿದೆ. ಇದರಿಂದ ರೈತರಿಗೆ ಗುಣಮಟ್ಟದ ಆಧಾರದ ಮೇಲೆ ಒಂದು ಲೀಟರ್ ಹಾಲಿಗೆ ಒಟ್ಟು ₹38 ಗಳವರೆಗೂ ದೊರೆಯಲಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.
ಅವರು ಈ ಕುರಿತು ಮಾಹಿತಿ ನೀಡಿ, ಬೆಂಗಳೂರು ಹಾಲು ಒಕ್ಕೂಟಕ್ಕೆ ಪ್ರತಿದಿನ 16 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದೆ. ಇದರಲ್ಲಿ 10 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ರೈತರ ಹಿರಕ್ಷಣೆ ಕಾಪಾಡುವ ಸಲುವಾಗಿ ತಾಲ್ಲೂಕು ಹಾಲು ಉತ್ಪಾದಕರ ಹಿತರಕ್ಷಣಾ ಸಮಿತಿ ರಚಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು, ಅಧ್ಯಕ್ಷರು ಸಮಿತಿಯ ಸದಸ್ಯರಾಗಿರುತ್ತಾರೆ.
ತಾಲ್ಲೂಕಿನ ಪ್ರತಿ ಹೋಬಳಿಯಿಂದ ನಾಲ್ಕು ಜನ ಅಧ್ಯಕ್ಷರು ಸಮಿತಿಯಲ್ಲಿ ನಿರ್ದೇಶಕರಾಗಿರಲಿದ್ದಾರೆ. ಸಮಿತಿಯು ಉತ್ಪಾದಕರ ಹಾಗೂ ಒಕ್ಕೂಟದೊಂದಿಗೆ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ ಎಂದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…