ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ನವೆಂಬರ್ 1 ರಿಂದ ಒಂದು ಲೀಟರ್ ಹಾಲಿಗೆ ರೈತರಿಗೆ ನೀಡಲಾಗುತ್ತಿದ್ದ ₹ 2.10 ಪೈಸೆ ಜೊತೆಗೆ ಡಿ.1 ರಿಂದ ಜಾರಿಗೆ ಬರುವಂತೆ ಮತ್ತೆ ₹ 90 ಪೈಸೆ ಸೇರಿ ₹3 ನೀಡಲಾಗುತ್ತಿದೆ. ಇದರಿಂದ ರೈತರಿಗೆ ಗುಣಮಟ್ಟದ ಆಧಾರದ ಮೇಲೆ ಒಂದು ಲೀಟರ್ ಹಾಲಿಗೆ ಒಟ್ಟು ₹38 ಗಳವರೆಗೂ ದೊರೆಯಲಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಹೇಳಿದರು.
ಅವರು ಈ ಕುರಿತು ಮಾಹಿತಿ ನೀಡಿ, ಬೆಂಗಳೂರು ಹಾಲು ಒಕ್ಕೂಟಕ್ಕೆ ಪ್ರತಿದಿನ 16 ಲಕ್ಷ ಲೀಟರ್ ಹಾಲು ಸರಬರಾಜು ಆಗುತ್ತಿದೆ. ಇದರಲ್ಲಿ 10 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ರೈತರ ಹಿರಕ್ಷಣೆ ಕಾಪಾಡುವ ಸಲುವಾಗಿ ತಾಲ್ಲೂಕು ಹಾಲು ಉತ್ಪಾದಕರ ಹಿತರಕ್ಷಣಾ ಸಮಿತಿ ರಚಿಸಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು, ಅಧ್ಯಕ್ಷರು ಸಮಿತಿಯ ಸದಸ್ಯರಾಗಿರುತ್ತಾರೆ.
ತಾಲ್ಲೂಕಿನ ಪ್ರತಿ ಹೋಬಳಿಯಿಂದ ನಾಲ್ಕು ಜನ ಅಧ್ಯಕ್ಷರು ಸಮಿತಿಯಲ್ಲಿ ನಿರ್ದೇಶಕರಾಗಿರಲಿದ್ದಾರೆ. ಸಮಿತಿಯು ಉತ್ಪಾದಕರ ಹಾಗೂ ಒಕ್ಕೂಟದೊಂದಿಗೆ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…