ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್ನ ಮದೀನಾ ಗ್ರಾಮದಲ್ಲಿ ಭತ್ತ ನಾಟಿ ಮಾಡಲು ರೈತರಿಗೆ ಸಹಾಯ ಮಾಡಿ, ಅವರ ಜೊತೆ ಮಾತುಕತೆ ನಡೆಸಿದರು.
ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದಾಗ ಭತ್ತದ ಗದ್ದೆಯೊಂದರ ಬಳಿ ಕಾರು ನಿಲ್ಲಿಸಿ ರೈತರೊಂದಿಗೆ ಭತ್ತ ನಾಟಿ ಮಾಡಿ ಟ್ರ್ಯಾಕ್ಟರ್ ಕೂಡ ಓಡಿಸಿ ನಾಡಿನ ಅನ್ನದಾತರ ವಿಚಾರಗಳನ್ನು ಆಲಿಸಿದರು.
ಈಗ ಭತ್ತ ನಾಟಿ ಮಾಡುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ