Categories: ರಾಜ್ಯ

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು: ಸಿಎಂ ಸಿದ್ದರಾಮಯ್ಯ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟ್ರದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು.

“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು‌ ತಿಳಿಸಿದರು.

ರಾಷ್ಟ್ರದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ‌ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಬಿಜೆಪಿ (BJP) ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದರು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

7 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

8 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

20 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago