Categories: ರಾಜ್ಯ

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು: ಸಿಎಂ ಸಿದ್ದರಾಮಯ್ಯ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟ್ರದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು.

“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು‌ ತಿಳಿಸಿದರು.

ರಾಷ್ಟ್ರದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ‌ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಬಿಜೆಪಿ (BJP) ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago