ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟ್ರದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು.
“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ರಾಷ್ಟ್ರದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಬಿಜೆಪಿ (BJP) ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…