Categories: ರಾಜ್ಯ

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು: ಸಿಎಂ ಸಿದ್ದರಾಮಯ್ಯ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟ್ರದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು.

“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು‌ ತಿಳಿಸಿದರು.

ರಾಷ್ಟ್ರದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ‌ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಬಿಜೆಪಿ (BJP) ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago