Categories: ರಾಜ್ಯ

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು: ಸಿಎಂ ಸಿದ್ದರಾಮಯ್ಯ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟ್ರದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು.

“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು‌ ತಿಳಿಸಿದರು.

ರಾಷ್ಟ್ರದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ‌ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಬಿಜೆಪಿ (BJP) ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ ಎಂದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

10 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

10 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

13 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago