ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಸಂಘದ ಮುಖಂಡರು ನಗರದ ಜಿಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಮುಖಂಡ ಗೋಪಾಲ್ ಮಾತನಾಡಿ ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಸ್.ಐ.ಟಿ. ನಿಯಮಾವಳಿ ಪ್ರಕಾರ ಅರಣ್ಯ ಜಮೀನು, ರೈತರ ಜಮೀನು, ಕಂದಾಯ ಇಲಾಖೆ ಜಮೀನು, ಇತರೆ ಜಮೀನುಗಳನ್ನು ತನಿಖೆ ಮಾಡಿ ರಾಜ್ಯ ಮಟ್ಟದ ಎಸ್.ಐ.ಟಿ. ಗೆ ವರದಿ ಮಾಡಲು ಸುಪ್ರೀಂಕೋರ್ಟ್ನ ಆದೇಶ ಆಗಿದ್ದು ಜಿಲ್ಲಾಧಿಕಾರಿಗಳ ತಂಡ ಪರಿಶೀಲನೆ ಮಾಡುವುದಕ್ಕೂ ಮೊದಲೇ ದೌರ್ಜನ್ಯದಿಂದ ರೈತರ ಜಮೀನುಗಳಿಗೆ ಬೌಂಡರಿಗಳು ಹಾಕುವುದು, ಬೆಳೆ ನಾಶ ಮಾಡುವುದು ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರನ್ನು ಕಳ್ಳರ ರೀತಿಯಲ್ಲಿ ನೋಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಸಾಲ ಮಾಡಿ ಕಟಾವಿಗೆ ಬಂದ ಬೆಳೆಗಳನ್ನು ನಾಶ ಮಾಡಲು ಅವರಿಗೆ ಯಾವ ಅಧಿಕಾರವಿದೆ ತಕ್ಷಣದಿಂದಲೇ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಎಸ್.ಐ.ಟಿ. ತನಿಖೆ ಆಗುವವರೆಗೂ ನಿಲ್ಲಿಸಬೇಕು ಯಾವುದೇ ಕಾರಣಕ್ಕೂ ಇತ್ಯರ್ಥವಾಗುವ ತನಕ ರೈತರಿಗೆ ತೊಂದರೆ ಕೊಡಬಾರದು ಎಂದು ಒತ್ತಾಯ ಮಾಡಿದರು
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ರೈತರಾದ ಶಿಳ್ಳೆಂಗೆರೆ ಶ್ರೀನಿವಾಸ್, ಗಂಗಮ್ಮ, ಜಿ.ಮಂಜುಳ, ಬಿ.ಎ.ಸೈಯದ್ ಪಾರುಕ್, ಚಲಪತಿ, ಹನುಮಪ್ಪ, ಚಂದ್ರಾರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥ್ ಮುಂತಾದವರಿದ್ದರು
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…