Categories: ಕೋಲಾರ

ರೈತರ ಜಮೀನಿಗೆ ಅರಣ್ಯ ಇಲಾಖೆ ಅಕ್ರಮ ಪ್ರವೇಶ: ಎಸ್ಐಟಿ ನಿಯಮಗಳ ಉಲ್ಲಂಘನೆ ವಿರುದ್ದ ಕ್ರಮಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಸಂಘದ ಮುಖಂಡರು ನಗರದ ಜಿಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಮುಖಂಡ ಗೋಪಾಲ್ ಮಾತನಾಡಿ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಸ್.ಐ.ಟಿ. ನಿಯಮಾವಳಿ ಪ್ರಕಾರ ಅರಣ್ಯ ಜಮೀನು, ರೈತರ ಜಮೀನು, ಕಂದಾಯ ಇಲಾಖೆ ಜಮೀನು, ಇತರೆ ಜಮೀನುಗಳನ್ನು ತನಿಖೆ ಮಾಡಿ ರಾಜ್ಯ ಮಟ್ಟದ ಎಸ್.ಐ.ಟಿ. ಗೆ ವರದಿ ಮಾಡಲು ಸುಪ್ರೀಂಕೋರ್ಟ್‌ನ ಆದೇಶ ಆಗಿದ್ದು ಜಿಲ್ಲಾಧಿಕಾರಿಗಳ ತಂಡ ಪರಿಶೀಲನೆ ಮಾಡುವುದಕ್ಕೂ ಮೊದಲೇ ದೌರ್ಜನ್ಯದಿಂದ ರೈತರ ಜಮೀನುಗಳಿಗೆ ಬೌಂಡರಿಗಳು ಹಾಕುವುದು, ಬೆಳೆ ನಾಶ ಮಾಡುವುದು ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರನ್ನು ಕಳ್ಳರ ರೀತಿಯಲ್ಲಿ ನೋಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಸಾಲ ಮಾಡಿ ಕಟಾವಿಗೆ ಬಂದ ಬೆಳೆಗಳನ್ನು ನಾಶ ಮಾಡಲು ಅವರಿಗೆ ಯಾವ ಅಧಿಕಾರವಿದೆ ತಕ್ಷಣದಿಂದಲೇ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಎಸ್.ಐ.ಟಿ. ತನಿಖೆ ಆಗುವವರೆಗೂ ನಿಲ್ಲಿಸಬೇಕು ಯಾವುದೇ ಕಾರಣಕ್ಕೂ ಇತ್ಯರ್ಥವಾಗುವ ತನಕ ರೈತರಿಗೆ ತೊಂದರೆ ಕೊಡಬಾರದು ಎಂದು ಒತ್ತಾಯ ಮಾಡಿದರು

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ರೈತರಾದ ಶಿಳ್ಳೆಂಗೆರೆ ಶ್ರೀನಿವಾಸ್, ಗಂಗಮ್ಮ, ಜಿ.ಮಂಜುಳ, ಬಿ.ಎ.ಸೈಯದ್ ಪಾರುಕ್, ಚಲಪತಿ, ಹನುಮಪ್ಪ, ಚಂದ್ರಾರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥ್ ಮುಂತಾದವರಿದ್ದರು

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

4 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

13 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

24 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago