ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಸಂಘದ ಮುಖಂಡರು ನಗರದ ಜಿಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಮುಖಂಡ ಗೋಪಾಲ್ ಮಾತನಾಡಿ ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಸ್.ಐ.ಟಿ. ನಿಯಮಾವಳಿ ಪ್ರಕಾರ ಅರಣ್ಯ ಜಮೀನು, ರೈತರ ಜಮೀನು, ಕಂದಾಯ ಇಲಾಖೆ ಜಮೀನು, ಇತರೆ ಜಮೀನುಗಳನ್ನು ತನಿಖೆ ಮಾಡಿ ರಾಜ್ಯ ಮಟ್ಟದ ಎಸ್.ಐ.ಟಿ. ಗೆ ವರದಿ ಮಾಡಲು ಸುಪ್ರೀಂಕೋರ್ಟ್ನ ಆದೇಶ ಆಗಿದ್ದು ಜಿಲ್ಲಾಧಿಕಾರಿಗಳ ತಂಡ ಪರಿಶೀಲನೆ ಮಾಡುವುದಕ್ಕೂ ಮೊದಲೇ ದೌರ್ಜನ್ಯದಿಂದ ರೈತರ ಜಮೀನುಗಳಿಗೆ ಬೌಂಡರಿಗಳು ಹಾಕುವುದು, ಬೆಳೆ ನಾಶ ಮಾಡುವುದು ಸುಪ್ರೀಂಕೋರ್ಟ್ನ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರನ್ನು ಕಳ್ಳರ ರೀತಿಯಲ್ಲಿ ನೋಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಸಾಲ ಮಾಡಿ ಕಟಾವಿಗೆ ಬಂದ ಬೆಳೆಗಳನ್ನು ನಾಶ ಮಾಡಲು ಅವರಿಗೆ ಯಾವ ಅಧಿಕಾರವಿದೆ ತಕ್ಷಣದಿಂದಲೇ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಎಸ್.ಐ.ಟಿ. ತನಿಖೆ ಆಗುವವರೆಗೂ ನಿಲ್ಲಿಸಬೇಕು ಯಾವುದೇ ಕಾರಣಕ್ಕೂ ಇತ್ಯರ್ಥವಾಗುವ ತನಕ ರೈತರಿಗೆ ತೊಂದರೆ ಕೊಡಬಾರದು ಎಂದು ಒತ್ತಾಯ ಮಾಡಿದರು
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ರೈತರಾದ ಶಿಳ್ಳೆಂಗೆರೆ ಶ್ರೀನಿವಾಸ್, ಗಂಗಮ್ಮ, ಜಿ.ಮಂಜುಳ, ಬಿ.ಎ.ಸೈಯದ್ ಪಾರುಕ್, ಚಲಪತಿ, ಹನುಮಪ್ಪ, ಚಂದ್ರಾರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥ್ ಮುಂತಾದವರಿದ್ದರು
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…