Categories: ಕೋಲಾರ

ರೈತರ ಜಮೀನಿಗೆ ಅರಣ್ಯ ಇಲಾಖೆ ಅಕ್ರಮ ಪ್ರವೇಶ: ಎಸ್ಐಟಿ ನಿಯಮಗಳ ಉಲ್ಲಂಘನೆ ವಿರುದ್ದ ಕ್ರಮಕ್ಕೆ ಒತ್ತಾಯ

ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು ಅರಣ್ಯ ಇಲಾಖೆಯ ವತಿಯಿಂದ ನಿಯಮಗಳು ಉಲ್ಲಂಘನೆಯಾಗಿದ್ದು ಕೂಡಲೇ ಸಂಬಂಧಿಸಿದ ಅರಣ್ಯ ಅಧಿಕಾರಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ಹಾಗೂ ರೈತ ಸಂಘದ ಮುಖಂಡರು ನಗರದ ಜಿಪಂ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಕೆಎಸ್ ರಾಜ್ಯ ಮುಖಂಡ ಗೋಪಾಲ್ ಮಾತನಾಡಿ ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಎಸ್.ಐ.ಟಿ. ರಚನೆಯಾಗಿದ್ದು, ಕೋಲಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಸ್.ಐ.ಟಿ. ನಿಯಮಾವಳಿ ಪ್ರಕಾರ ಅರಣ್ಯ ಜಮೀನು, ರೈತರ ಜಮೀನು, ಕಂದಾಯ ಇಲಾಖೆ ಜಮೀನು, ಇತರೆ ಜಮೀನುಗಳನ್ನು ತನಿಖೆ ಮಾಡಿ ರಾಜ್ಯ ಮಟ್ಟದ ಎಸ್.ಐ.ಟಿ. ಗೆ ವರದಿ ಮಾಡಲು ಸುಪ್ರೀಂಕೋರ್ಟ್‌ನ ಆದೇಶ ಆಗಿದ್ದು ಜಿಲ್ಲಾಧಿಕಾರಿಗಳ ತಂಡ ಪರಿಶೀಲನೆ ಮಾಡುವುದಕ್ಕೂ ಮೊದಲೇ ದೌರ್ಜನ್ಯದಿಂದ ರೈತರ ಜಮೀನುಗಳಿಗೆ ಬೌಂಡರಿಗಳು ಹಾಕುವುದು, ಬೆಳೆ ನಾಶ ಮಾಡುವುದು ಸುಪ್ರೀಂಕೋರ್ಟ್‌ನ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರನ್ನು ಕಳ್ಳರ ರೀತಿಯಲ್ಲಿ ನೋಡುವ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ ಸಾಲ ಮಾಡಿ ಕಟಾವಿಗೆ ಬಂದ ಬೆಳೆಗಳನ್ನು ನಾಶ ಮಾಡಲು ಅವರಿಗೆ ಯಾವ ಅಧಿಕಾರವಿದೆ ತಕ್ಷಣದಿಂದಲೇ ಅರಣ್ಯ ಇಲಾಖೆಯ ದೌರ್ಜನ್ಯವನ್ನು ಎಸ್.ಐ.ಟಿ. ತನಿಖೆ ಆಗುವವರೆಗೂ ನಿಲ್ಲಿಸಬೇಕು ಯಾವುದೇ ಕಾರಣಕ್ಕೂ ಇತ್ಯರ್ಥವಾಗುವ ತನಕ ರೈತರಿಗೆ ತೊಂದರೆ ಕೊಡಬಾರದು ಎಂದು ಒತ್ತಾಯ ಮಾಡಿದರು

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್, ರೈತರಾದ ಶಿಳ್ಳೆಂಗೆರೆ ಶ್ರೀನಿವಾಸ್, ಗಂಗಮ್ಮ, ಜಿ.ಮಂಜುಳ, ಬಿ.ಎ.ಸೈಯದ್ ಪಾರುಕ್, ಚಲಪತಿ, ಹನುಮಪ್ಪ, ಚಂದ್ರಾರೆಡ್ಡಿ, ವೆಂಕಟರಾಮರೆಡ್ಡಿ, ಮಂಜುನಾಥ್ ಮುಂತಾದವರಿದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

14 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

18 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago