ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆಗಾಗಿ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ರೈತರ ಜಾಥಾ

ತಾಲೂಕಿನ  ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿಯ ರೈತರ ಜಮೀನುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದ ಕಾರಣ ಕಳೆದ 176 ದಿನಗಳಿಂದ ಅನಿರ್ದಿಷ್ಟಾವದಿ ಧರಣಿ ನಡೆಸುತ್ತಿರುವ ರೈತರು ಇಂದು ಕೊನಘಟ್ಟ ಗ್ರಾಮದಿಂದ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ತಾಲೂಕು ಕಚೇರಿಯವರಿಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ಪ್ರತಿಭಟನೆಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಗ್ರಾಮಗಳ  ರೈತ ಮುಖಂಡರಾದ ಆನಂದ್, ಕೋಡಿಹಳ್ಳಿ ಕೃಷ್ಣಪ್ಪ, ಕೊನಘಟ್ಟ ನರಸಿಂಹಮೂರ್ತಿ, ರಮೇಶ್,ನಾಗದೇನಹಳ್ಳಿ ಶ್ರೀನಿವಾಸಮೂರ್ತಿ, ಸೊಣ್ಣಪನಹಳ್ಳಿ ಚಿಕ್ಕನರಸಪ್ಪ, ಮೋಪರಹಳ್ಳಿನಾಗರಾಜ್, ಕೋಡಿಹಳ್ಳಿ ಶಿವಕುಮಾರ್, ನಾಗದೇನಹಳ್ಳಿ ಆನಂದ್ ಗೌಡ,  ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

4 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

5 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

13 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

16 hours ago