ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.
ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.
ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…