ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆಗಾಗಿ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ರೈತರ ಜಾಥಾ

ತಾಲೂಕಿನ  ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿಯ ರೈತರ ಜಮೀನುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದ ಕಾರಣ ಕಳೆದ 176 ದಿನಗಳಿಂದ ಅನಿರ್ದಿಷ್ಟಾವದಿ ಧರಣಿ ನಡೆಸುತ್ತಿರುವ ರೈತರು ಇಂದು ಕೊನಘಟ್ಟ ಗ್ರಾಮದಿಂದ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ತಾಲೂಕು ಕಚೇರಿಯವರಿಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ಪ್ರತಿಭಟನೆಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಗ್ರಾಮಗಳ  ರೈತ ಮುಖಂಡರಾದ ಆನಂದ್, ಕೋಡಿಹಳ್ಳಿ ಕೃಷ್ಣಪ್ಪ, ಕೊನಘಟ್ಟ ನರಸಿಂಹಮೂರ್ತಿ, ರಮೇಶ್,ನಾಗದೇನಹಳ್ಳಿ ಶ್ರೀನಿವಾಸಮೂರ್ತಿ, ಸೊಣ್ಣಪನಹಳ್ಳಿ ಚಿಕ್ಕನರಸಪ್ಪ, ಮೋಪರಹಳ್ಳಿನಾಗರಾಜ್, ಕೋಡಿಹಳ್ಳಿ ಶಿವಕುಮಾರ್, ನಾಗದೇನಹಳ್ಳಿ ಆನಂದ್ ಗೌಡ,  ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

5 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

12 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

15 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago