ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆಗಾಗಿ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ರೈತರ ಜಾಥಾ

ತಾಲೂಕಿನ  ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿಯ ರೈತರ ಜಮೀನುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದ ಕಾರಣ ಕಳೆದ 176 ದಿನಗಳಿಂದ ಅನಿರ್ದಿಷ್ಟಾವದಿ ಧರಣಿ ನಡೆಸುತ್ತಿರುವ ರೈತರು ಇಂದು ಕೊನಘಟ್ಟ ಗ್ರಾಮದಿಂದ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ತಾಲೂಕು ಕಚೇರಿಯವರಿಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ಪ್ರತಿಭಟನೆಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಗ್ರಾಮಗಳ  ರೈತ ಮುಖಂಡರಾದ ಆನಂದ್, ಕೋಡಿಹಳ್ಳಿ ಕೃಷ್ಣಪ್ಪ, ಕೊನಘಟ್ಟ ನರಸಿಂಹಮೂರ್ತಿ, ರಮೇಶ್,ನಾಗದೇನಹಳ್ಳಿ ಶ್ರೀನಿವಾಸಮೂರ್ತಿ, ಸೊಣ್ಣಪನಹಳ್ಳಿ ಚಿಕ್ಕನರಸಪ್ಪ, ಮೋಪರಹಳ್ಳಿನಾಗರಾಜ್, ಕೋಡಿಹಳ್ಳಿ ಶಿವಕುಮಾರ್, ನಾಗದೇನಹಳ್ಳಿ ಆನಂದ್ ಗೌಡ,  ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

9 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

13 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

14 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

21 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago