ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.
ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.
ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…